Genesis 22:18
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
Genesis 22:18 in Other Translations
King James Version (KJV)
And in thy seed shall all the nations of the earth be blessed; because thou hast obeyed my voice.
American Standard Version (ASV)
And in thy seed shall all the nations of the earth be blessed. Because thou hast obeyed my voice.
Bible in Basic English (BBE)
And your seed will be a blessing to all the nations of the earth, because you have done what I gave you orders to do.
Darby English Bible (DBY)
and in thy seed shall all the nations of the earth bless themselves, because thou hast hearkened to my voice.
Webster's Bible (WBT)
And in thy seed shall all the nations of the earth be blessed: because thou hast obeyed my voice.
World English Bible (WEB)
In your seed will all the nations of the earth be blessed, because you have obeyed my voice."
Young's Literal Translation (YLT)
and blessed themselves in thy seed have all nations of the earth, because that thou hast hearkened to My voice.'
| And in thy seed | וְהִתְבָּרֲכ֣וּ | wĕhitbārăkû | veh-heet-ba-ruh-HOO |
| shall all | בְזַרְעֲךָ֔ | bĕzarʿăkā | veh-zahr-uh-HA |
| the nations | כֹּ֖ל | kōl | kole |
| earth the of | גּוֹיֵ֣י | gôyê | ɡoh-YAY |
| be blessed; | הָאָ֑רֶץ | hāʾāreṣ | ha-AH-rets |
| because | עֵ֕קֶב | ʿēqeb | A-kev |
| אֲשֶׁ֥ר | ʾăšer | uh-SHER | |
| obeyed hast thou | שָׁמַ֖עְתָּ | šāmaʿtā | sha-MA-ta |
| my voice. | בְּקֹלִֽי׃ | bĕqōlî | beh-koh-LEE |
Cross Reference
Acts 3:25
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
Genesis 12:3
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
Genesis 18:18
ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
Galatians 3:16
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
Genesis 26:4
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
Ephesians 1:3
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
Romans 1:3
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
Psalm 72:17
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
Genesis 22:3
ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
Hebrews 11:1
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
Galatians 3:28
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
Galatians 3:18
ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
Galatians 3:8
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
Jeremiah 7:23
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
1 Samuel 2:30
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
Genesis 22:10
ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.