Isaiah 53:3 ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
Isaiah 53:3 in Other Translations
King James Version (KJV) He is despised and rejected of men; a man of sorrows, and acquainted with grief: and we hid as it were our faces from him; he was despised, and we esteemed him not.
American Standard Version (ASV) He was despised, and rejected of men; a man of sorrows, and acquainted with grief: and as one from whom men hide their face he was despised; and we esteemed him not.
Bible in Basic English (BBE) Men made sport of him, turning away from him; he was a man of sorrows, marked by disease; and like one from whom men's faces are turned away, he was looked down on, and we put no value on him.
Darby English Bible (DBY) He is despised and left alone of men; a man of sorrows, and acquainted with grief, and like one from whom [men] hide their faces; -- despised, and we esteemed him not.
World English Bible (WEB) He was despised, and rejected by men; a man of suffering, and acquainted with disease: and as one from whom men hide their face he was despised; and we didn't respect him.
Young's Literal Translation (YLT) He is despised, and left of men, A man of pains, and acquainted with sickness, And as one hiding the face from us, He is despised, and we esteemed him not.
Read Full Chapter :
Isaiah 53
Cross Reference
Isaiah 53:10
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
Isaiah 49:7
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
John 1:10
ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
Mark 14:34
ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
Isaiah 50:6
ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
Isaiah 53:4
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
Zechariah 11:8
ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
Zechariah 11:12
ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
Matthew 26:67
ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
Mark 9:12
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
Luke 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
Hebrews 12:2
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
Hebrews 5:7
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
Psalm 22:6
ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
Acts 3:13
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
Deuteronomy 32:15
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
Psalm 69:10
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
Psalm 69:19
ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.
Psalm 69:29
ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
Micah 5:1
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
Matthew 26:37
ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
Matthew 27:9
ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
Matthew 27:39
ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
Matthew 27:63
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
Mark 15:19
ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
John 8:48
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
Hebrews 2:15
ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.
Hebrews 4:15
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.
Luke 8:53
ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
John 11:35
ಯೇಸು ಅತ್ತನು.
Luke 23:18
ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
Luke 19:41
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
Luke 16:14
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.