Jeremiah 23:17 in Kannada

Kannada Kannada Bible Jeremiah Jeremiah 23 Jeremiah 23:17

Jeremiah 23:17
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

Jeremiah 23:16Jeremiah 23Jeremiah 23:18

Jeremiah 23:17 in Other Translations

King James Version (KJV)
They say still unto them that despise me, The LORD hath said, Ye shall have peace; and they say unto every one that walketh after the imagination of his own heart, No evil shall come upon you.

American Standard Version (ASV)
They say continually unto them that despise me, Jehovah hath said, Ye shall have peace; and unto every one that walketh in the stubbornness of his own heart they say, No evil shall come upon you.

Bible in Basic English (BBE)
They keep on saying to those who have no respect for the word of the Lord, You will have peace; and to everyone who goes on his way in the pride of his heart, they say, No evil will come to you.

Darby English Bible (DBY)
They say constantly unto them that despise me, Jehovah hath said, Ye shall have peace. And they say unto every one that walketh in the stubbornness of his heart, No evil shall come upon you.

World English Bible (WEB)
They say continually to those who despise me, Yahweh has said, You shall have peace; and to everyone who walks in the stubbornness of his own heart they say, No evil shall come on you.

Young's Literal Translation (YLT)
Saying diligently to those despising The word of Jehovah: Peace is for you, And `to' every one walking in the stubbornness of his heart they have said: Evil doth not come in unto you.

They
say
אֹמְרִ֤יםʾōmĕrîmoh-meh-REEM
still
אָמוֹר֙ʾāmôrah-MORE
unto
them
that
despise
לִֽמְנַאֲצַ֔יlimĕnaʾăṣaylee-meh-na-uh-TSAI
Lord
The
me,
דִּבֶּ֣רdibberdee-BER
hath
said,
יְהוָ֔הyĕhwâyeh-VA
Ye
shall
have
שָׁל֖וֹםšālômsha-LOME
peace;
יִֽהְיֶ֣הyihĕyeyee-heh-YEH
say
they
and
לָכֶ֑םlākemla-HEM
unto
every
one
וְ֠כֹלwĕkōlVEH-hole
walketh
that
הֹלֵ֞ךְhōlēkhoh-LAKE
after
the
imagination
בִּשְׁרִר֤וּתbišrirûtbeesh-ree-ROOT
heart,
own
his
of
לִבּוֹ֙libbôlee-BOH
No
אָֽמְר֔וּʾāmĕrûah-meh-ROO
evil
לֹֽאlōʾloh
shall
come
תָב֥וֹאtābôʾta-VOH
upon
עֲלֵיכֶ֖םʿălêkemuh-lay-HEM
you.
רָעָֽה׃rāʿâra-AH

Cross Reference

Micah 3:11
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.

Jeremiah 13:10
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.

Amos 9:10
ಕೇಡು ನಮ್ಮನ್ನು ಹಿಂದಟ್ಟದು, ನಮ್ಮನ್ನು ತಡೆಯುವದಿಲ್ಲ ಎನ್ನುವ ನನ್ನ ಜನರಲ್ಲಿರುವ ಪಾಪಿಷ್ಠರು ಕತ್ತಿಯಿಂದ ಸಾಯುವರು.

Jeremiah 8:11
ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?

Jeremiah 3:17
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.

Jeremiah 5:12
ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.

Jeremiah 6:14
ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.

Jeremiah 9:14
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.

Jeremiah 18:18
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

Ezekiel 13:10
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ

Ezekiel 13:22
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.

Micah 3:5
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

Zechariah 10:2
ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.

Deuteronomy 29:19
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

Numbers 11:20
ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.

1 Thessalonians 4:8
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.

1 Samuel 2:30
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

2 Samuel 12:10
ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.

Isaiah 3:10
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

Isaiah 57:21
ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

Jeremiah 4:10
ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?

Jeremiah 7:24
ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

Jeremiah 14:13
ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.

Jeremiah 28:3
ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.

Lamentations 2:14
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.

Ezekiel 13:15
ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು

Malachi 1:6
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

Luke 10:16
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.

Zephaniah 1:12
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.