1 ಪೇತ್ರನು 2:24 in Kannada

ಕನ್ನಡ ಕನ್ನಡ ಬೈಬಲ್ 1 ಪೇತ್ರನು 1 ಪೇತ್ರನು 2 1 ಪೇತ್ರನು 2:24

1 Peter 2:24
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

1 Peter 2:231 Peter 21 Peter 2:25

1 Peter 2:24 in Other Translations

King James Version (KJV)
Who his own self bare our sins in his own body on the tree, that we, being dead to sins, should live unto righteousness: by whose stripes ye were healed.

American Standard Version (ASV)
who his own self bare our sins in his body upon the tree, that we, having died unto sins, might live unto righteousness; by whose stripes ye were healed.

Bible in Basic English (BBE)
He took our sins on himself, giving his body to be nailed on the tree, so that we, being dead to sin, might have a new life in righteousness, and by his wounds we have been made well.

Darby English Bible (DBY)
who himself bore our sins in his body on the tree, in order that, being dead to sins, we may live to righteousness: by whose stripes ye have been healed.

World English Bible (WEB)
who his own self bore our sins in his body on the tree, that we, having died to sins, might live to righteousness; by whose stripes you were healed.

Young's Literal Translation (YLT)
who our sins himself did bear in his body, upon the tree, that to the sins having died, to the righteousness we may live; by whose stripes ye were healed,

Who
ὃςhosose
his
own
self
τὰςtastahs
bare
ἁμαρτίαςhamartiasa-mahr-TEE-as
our
ἡμῶνhēmōnay-MONE

αὐτὸςautosaf-TOSE
sins
ἀνήνεγκενanēnenkenah-NAY-nayng-kane
in
ἐνenane
own
his
τῷtoh

σώματιsōmatiSOH-ma-tee
body
αὐτοῦautouaf-TOO
on
ἐπὶepiay-PEE
the
τὸtotoh
tree,
ξύλονxylonKSYOO-lone
that
ἵναhinaEE-na
should
dead
being
we,
ταῖςtaistase
to

ἁμαρτίαιςhamartiaisa-mahr-TEE-ase
sins,
ἀπογενόμενοιapogenomenoiah-poh-gay-NOH-may-noo
live
τῇtay
unto

δικαιοσύνῃdikaiosynēthee-kay-oh-SYOO-nay
righteousness:
ζήσωμενzēsōmenZAY-soh-mane
whose
by
οὗhouoo
stripes

τῷtoh

μώλωπιmōlōpiMOH-loh-pee

ye
were
αὐτοῦautouaf-TOO
healed.
ἰάθητεiathēteee-AH-thay-tay

Cross Reference

ಯೆಶಾಯ 53:4
ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.

ರೋಮಾಪುರದವರಿಗೆ 6:11
ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.

ಮತ್ತಾಯನು 8:17
ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.

ಯೆಶಾಯ 53:11
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.

ರೋಮಾಪುರದವರಿಗೆ 6:2
ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?

ಇಬ್ರಿಯರಿಗೆ 9:28
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಯಾಕೋಬನು 5:16
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

ಗಲಾತ್ಯದವರಿಗೆ 3:13
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಧರ್ಮೋಪದೇಶಕಾಂಡ 21:22
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆ

ಅಪೊಸ್ತಲರ ಕೃತ್ಯಗ 5:30
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ರೋಮಾಪುರದವರಿಗೆ 6:13
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.

ರೋಮಾಪುರದವರಿಗೆ 7:6
ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.

ರೋಮಾಪುರದವರಿಗೆ 6:16
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.

2 ಕೊರಿಂಥದವರಿಗೆ 6:17
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

ಕೊಲೊಸ್ಸೆಯವರಿಗೆ 2:20
ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ

1 ಯೋಹಾನನು 3:7
ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.

ಪ್ರಕಟನೆ 22:2
ಅದರ ಬೀದಿಯ ಮಧ್ಯದಲ್ಲಿಯೂ ಆ ನದಿಯ ಉಭಯ ಪಾರ್ಶ್ವಗಳಲ್ಲಿಯೂ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಇದ್ದವು.

1 ಯೋಹಾನನು 2:29
ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.

1 ಪೇತ್ರನು 4:1
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.

ಇಬ್ರಿಯರಿಗೆ 12:13
ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.

ಇಬ್ರಿಯರಿಗೆ 7:26
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ಕೊಲೊಸ್ಸೆಯವರಿಗೆ 3:3
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.

ಫಿಲಿಪ್ಪಿಯವರಿಗೆ 1:11
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

ಕೀರ್ತನೆಗಳು 147:3
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.

ಲೂಕನು 1:74
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಯೋಹಾನನು 1:29
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.

ಯೋಹಾನನು 19:1
ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.

ಅಪೊಸ್ತಲರ ಕೃತ್ಯಗ 10:35
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

ಅಪೊಸ್ತಲರ ಕೃತ್ಯಗ 10:39
ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

ಅಪೊಸ್ತಲರ ಕೃತ್ಯಗ 13:29
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ರೋಮಾಪುರದವರಿಗೆ 6:7
ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.

ರೋಮಾಪುರದವರಿಗೆ 6:22
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.

ಎಫೆಸದವರಿಗೆ 5:9
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

ಯಾಜಕಕಾಂಡ 16:22
ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.

ಯಾಜಕಕಾಂಡ 22:9
ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಅರಣ್ಯಕಾಂಡ 18:22
ಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.

ಮಲಾಕಿಯ 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಕೀರ್ತನೆಗಳು 38:4
ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.

ಮತ್ತಾಯನು 5:20
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.

ಮತ್ತಾಯನು 27:26
ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.

ವಿಮೋಚನಕಾಂಡ 28:38
ಇಸ್ರಾಯೇಲ್‌ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.