ಅಪೊಸ್ತಲರ ಕೃತ್ಯಗ 4:11 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 4 ಅಪೊಸ್ತಲರ ಕೃತ್ಯಗ 4:11

Acts 4:11
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.

Acts 4:10Acts 4Acts 4:12

Acts 4:11 in Other Translations

King James Version (KJV)
This is the stone which was set at nought of you builders, which is become the head of the corner.

American Standard Version (ASV)
He is the stone which was set at nought of you the builders, which was made the head of the corner.

Bible in Basic English (BBE)
He is the stone which you builders had no use for, but which has been made the chief stone of the building.

Darby English Bible (DBY)
*He* is the stone which has been set at nought by you the builders, which is become the corner stone.

World English Bible (WEB)
He is 'the stone which was regarded as worthless by you, the builders, which has become the head of the corner.'

Young's Literal Translation (YLT)
`This is the stone that was set at nought by you -- the builders, that became head of a corner;

This
οὗτόςhoutosOO-TOSE
is
ἐστινestinay-steen
the
hooh
stone
λίθοςlithosLEE-those
which
hooh
nought
at
set
was
ἐξουθενηθεὶςexouthenētheisayks-oo-thay-nay-THEES
of
ὑφ'hyphyoof
you
ὑμῶνhymōnyoo-MONE

τῶνtōntone
builders,
οἰκοδόμούντων,oikodomountōnoo-koh-THOH-MOON-tone
which
hooh
is
become
γενόμενοςgenomenosgay-NOH-may-nose
the
εἰςeisees
head
κεφαλὴνkephalēnkay-fa-LANE
of
the
corner.
γωνίαςgōniasgoh-NEE-as

Cross Reference

ಕೀರ್ತನೆಗಳು 118:22
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಯೆಶಾಯ 28:16
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

ಙ್ಞಾನೋಕ್ತಿಗಳು 28:1
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

ಅಪೊಸ್ತಲರ ಕೃತ್ಯಗ 7:52
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಅಪೊಸ್ತಲರ ಕೃತ್ಯಗ 20:26
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.

2 ಕೊರಿಂಥದವರಿಗೆ 3:12
ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.

2 ಕೊರಿಂಥದವರಿಗೆ 4:1
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.

ಎಫೆಸದವರಿಗೆ 2:20
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

1 ಪೇತ್ರನು 2:6
ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.

ಲೂಕನು 20:16
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.

ಮಾರ್ಕನು 12:10
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಯೆಹೆಜ್ಕೇಲನು 2:6
ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.

ಯೆಹೆಜ್ಕೇಲನು 3:7
ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.

ಯೆಹೆಜ್ಕೇಲನು 3:18
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.

ಯೆಹೆಜ್ಕೇಲನು 33:7
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.

ಜೆಕರ್ಯ 3:9
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಜೆಕರ್ಯ 4:6
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯನು 21:42
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ಮಾರ್ಕನು 9:12
ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?

ಯೆಶಾಯ 58:1
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.