ಪ್ರಸಂಗಿ 7:9 in Kannada

ಕನ್ನಡ ಕನ್ನಡ ಬೈಬಲ್ ಪ್ರಸಂಗಿ ಪ್ರಸಂಗಿ 7 ಪ್ರಸಂಗಿ 7:9

Ecclesiastes 7:9
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.

Ecclesiastes 7:8Ecclesiastes 7Ecclesiastes 7:10

Ecclesiastes 7:9 in Other Translations

King James Version (KJV)
Be not hasty in thy spirit to be angry: for anger resteth in the bosom of fools.

American Standard Version (ASV)
Be not hasty in thy spirit to be angry; for anger resteth in the bosom of fools.

Bible in Basic English (BBE)
Be not quick to let your spirit be angry; because wrath is in the heart of the foolish.

Darby English Bible (DBY)
Be not hasty in thy spirit to be vexed; for vexation resteth in the bosom of fools.

World English Bible (WEB)
Don't be hasty in your spirit to be angry, for anger rests in the bosom of fools.

Young's Literal Translation (YLT)
Be not hasty in thy spirit to be angry, For anger in the bosom of fools resteth.

Be
not
אַלʾalal
hasty
תְּבַהֵ֥לtĕbahēlteh-va-HALE
in
thy
spirit
בְּרֽוּחֲךָ֖bĕrûḥăkābeh-roo-huh-HA
angry:
be
to
לִכְע֑וֹסlikʿôsleek-OSE
for
כִּ֣יkee
anger
כַ֔עַסkaʿasHA-as
resteth
בְּחֵ֥יקbĕḥêqbeh-HAKE
in
the
bosom
כְּסִילִ֖יםkĕsîlîmkeh-see-LEEM
of
fools.
יָנֽוּחַ׃yānûaḥya-NOO-ak

Cross Reference

ಯಾಕೋಬನು 1:19
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

ಙ್ಞಾನೋಕ್ತಿಗಳು 14:17
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.

ಙ್ಞಾನೋಕ್ತಿಗಳು 16:32
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ಎಫೆಸದವರಿಗೆ 4:26
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;

ಮಾರ್ಕನು 6:24
ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.

ಮಾರ್ಕನು 6:19
ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ.

ಯೋನ 4:9
ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.

ಙ್ಞಾನೋಕ್ತಿಗಳು 26:23
ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.

ಎಸ್ತೇರಳು 3:5
ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.

2 ಸಮುವೇಲನು 19:43
ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

2 ಸಮುವೇಲನು 13:32
ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;

2 ಸಮುವೇಲನು 13:28
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.

2 ಸಮುವೇಲನು 13:22
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.

1 ಸಮುವೇಲನು 25:21
ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.

ಆದಿಕಾಂಡ 34:30
ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.

ಆದಿಕಾಂಡ 34:25
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.

ಆದಿಕಾಂಡ 34:7
ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.

ಆದಿಕಾಂಡ 4:8
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

ಆದಿಕಾಂಡ 4:5
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.