ಇಬ್ರಿಯರಿಗೆ 9:14 in Kannada

ಕನ್ನಡ ಕನ್ನಡ ಬೈಬಲ್ ಇಬ್ರಿಯರಿಗೆ ಇಬ್ರಿಯರಿಗೆ 9 ಇಬ್ರಿಯರಿಗೆ 9:14

Hebrews 9:14
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

Hebrews 9:13Hebrews 9Hebrews 9:15

Hebrews 9:14 in Other Translations

King James Version (KJV)
How much more shall the blood of Christ, who through the eternal Spirit offered himself without spot to God, purge your conscience from dead works to serve the living God?

American Standard Version (ASV)
how much more shall the blood of Christ, who through the eternal Spirit offered himself without blemish unto God, cleanse your conscience from dead works to serve the living God?

Bible in Basic English (BBE)
How much more will the blood of Christ, who, being without sin, made an offering of himself to God through the Holy Spirit, make your hearts clean from dead works to be servants of the living God?

Darby English Bible (DBY)
how much rather shall the blood of the Christ, who by the eternal Spirit offered himself spotless to God, purify your conscience from dead works to worship [the] living God?

World English Bible (WEB)
how much more will the blood of Christ, who through the eternal Spirit offered himself without blemish to God, cleanse your conscience from dead works to serve the living God?

Young's Literal Translation (YLT)
how much more shall the blood of the Christ (who through the age-during Spirit did offer himself unblemished to God) purify your conscience from dead works to serve the living God?

How
much
πόσῳposōPOH-soh
more
μᾶλλονmallonMAHL-lone
shall
the
τὸtotoh
blood
αἷμαhaimaAY-ma
of

τοῦtoutoo
Christ,
Χριστοῦchristouhree-STOO
who
ὃςhosose
through
διὰdiathee-AH
the
eternal
πνεύματοςpneumatosPNAVE-ma-tose
Spirit
αἰωνίουaiōniouay-oh-NEE-oo
offered
ἑαυτὸνheautonay-af-TONE
himself
προσήνεγκενprosēnenkenprose-A-nayng-kane
spot
without
ἄμωμονamōmonAH-moh-mone
to

τῷtoh
God,
θεῷtheōthay-OH
purge
καθαριεῖkatharieika-tha-ree-EE
your
τὴνtēntane

συνείδησινsyneidēsinsyoon-EE-thay-seen
conscience
ὑμῶνhymōnyoo-MONE
from
ἀπὸapoah-POH
dead
νεκρῶνnekrōnnay-KRONE
works
ἔργωνergōnARE-gone
to
εἰςeisees
serve
τὸtotoh

λατρεύεινlatreueinla-TRAVE-een
the
living
θεῷtheōthay-OH
God?
ζῶντιzōntiZONE-tee

Cross Reference

1 ಪೇತ್ರನು 3:18
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

ಇಬ್ರಿಯರಿಗೆ 1:3
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.

ಇಬ್ರಿಯರಿಗೆ 10:22
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.

ಇಬ್ರಿಯರಿಗೆ 9:12
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.

ಇಬ್ರಿಯರಿಗೆ 6:1
ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ

ತೀತನಿಗೆ 2:14
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

ಇಬ್ರಿಯರಿಗೆ 7:27
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಯೆರೆಮಿಯ 10:10
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.

ಇಬ್ರಿಯರಿಗೆ 10:2
ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

1 ಪೇತ್ರನು 1:19
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ಅಪೊಸ್ತಲರ ಕೃತ್ಯಗ 14:15
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ

ರೋಮಾಪುರದವರಿಗೆ 6:13
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.

ಎಫೆಸದವರಿಗೆ 5:2
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

1 ಪೇತ್ರನು 4:2
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.

1 ಯೋಹಾನನು 1:7
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.

1 ಥೆಸಲೊನೀಕದವರಿಗೆ 1:9
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.

ಎಫೆಸದವರಿಗೆ 2:5
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)

ಗಲಾತ್ಯದವರಿಗೆ 2:19
ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.

ರೋಮಾಪುರದವರಿಗೆ 11:12
ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?

2 ಕೊರಿಂಥದವರಿಗೆ 6:16
ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.

2 ಕೊರಿಂಥದವರಿಗೆ 5:21
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ರೋಮಾಪುರದವರಿಗೆ 11:24
ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.

1 ತಿಮೊಥೆಯನಿಗೆ 1:17
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.

1 ತಿಮೊಥೆಯನಿಗೆ 3:15
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.

ಇಬ್ರಿಯರಿಗೆ 9:7
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.

ಇಬ್ರಿಯರಿಗೆ 9:9
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.

ಇಬ್ರಿಯರಿಗೆ 11:21
ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

1 ಪೇತ್ರನು 2:22
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

1 ಯೋಹಾನನು 3:5
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.

ಪ್ರಕಟನೆ 1:5
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

ಧರ್ಮೋಪದೇಶಕಾಂಡ 17:1
ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.

1 ಪೇತ್ರನು 2:24
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

ರೋಮಾಪುರದವರಿಗೆ 6:22
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.

ರೋಮಾಪುರದವರಿಗೆ 1:20
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.

ಯೆಶಾಯ 42:1
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಯೋಬನು 15:16
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!

2 ಅರಸುಗಳು 19:16
ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.

2 ಸಮುವೇಲನು 4:11
ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.

1 ಸಮುವೇಲನು 17:26
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.

ಧರ್ಮೋಪದೇಶಕಾಂಡ 33:27
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

ಧರ್ಮೋಪದೇಶಕಾಂಡ 31:27
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

ಧರ್ಮೋಪದೇಶಕಾಂಡ 15:21
ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ

ಧರ್ಮೋಪದೇಶಕಾಂಡ 5:26
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?

ಅರಣ್ಯಕಾಂಡ 28:11
ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ

ಅರಣ್ಯಕಾಂಡ 28:9
ಆದರೆ ಸಬ್ಬತ್‌ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ

ಅರಣ್ಯಕಾಂಡ 28:3
ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.

ಅರಣ್ಯಕಾಂಡ 19:2
ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್‌ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.

ಯೆಶಾಯ 53:9
ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.

ಯೆಶಾಯ 57:15
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ರೋಮಾಪುರದವರಿಗೆ 1:4
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;

ಅಪೊಸ್ತಲರ ಕೃತ್ಯಗ 10:38
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

ಅಪೊಸ್ತಲರ ಕೃತ್ಯಗ 1:2
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.

ಯೋಹಾನನು 3:34
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.

ಲೂಕನು 12:28
ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?

ಲೂಕನು 12:24
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕನು 1:74
ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ

ಮತ್ತಾಯನು 20:28
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ಮತ್ತಾಯನು 12:28
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

ಮತ್ತಾಯನು 7:11
ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ದಾನಿಯೇಲನು 6:26
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.

ಯಾಜಕಕಾಂಡ 22:20
ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.