ಲೂಕನು 9:44 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 9 ಲೂಕನು 9:44

Luke 9:44
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

Luke 9:43Luke 9Luke 9:45

Luke 9:44 in Other Translations

King James Version (KJV)
Let these sayings sink down into your ears: for the Son of man shall be delivered into the hands of men.

American Standard Version (ASV)
Let these words sink into your ears: for the Son of man shall be delivered up into the hands of men.

Bible in Basic English (BBE)
Let these words go deep into your ears, for the Son of man will be given up into the hands of men.

Darby English Bible (DBY)
Do *ye* let these words sink into your ears. For the Son of man is about to be delivered into men's hands.

World English Bible (WEB)
"Let these words sink into your ears, for the Son of Man will be delivered up into the hands of men."

Young's Literal Translation (YLT)
`Lay ye to your ears these words, for the Son of Man is about to be delivered up to the hands of men.'

Let
these
sink
ΘέσθεthestheTHAY-sthay

ὑμεῖςhymeisyoo-MEES
sayings
εἰςeisees
down
τὰtata

ὦταōtaOH-ta
into
ὑμῶνhymōnyoo-MONE
your
τοὺςtoustoos

λόγουςlogousLOH-goos
ears:
τούτους·toutousTOO-toos
for
hooh
the
γὰρgargahr
Son
υἱὸςhuiosyoo-OSE
of

τοῦtoutoo
man
ἀνθρώπουanthrōpouan-THROH-poo
shall
μέλλειmelleiMALE-lee
delivered
be
παραδίδοσθαιparadidosthaipa-ra-THEE-thoh-sthay
into
εἰςeisees
the
hands
χεῖραςcheirasHEE-rahs
of
men.
ἀνθρώπωνanthrōpōnan-THROH-pone

Cross Reference

ಲೂಕನು 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕನು 24:44
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನನು 2:19
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಯೋಹಾನನು 16:4
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.

ಯೋಹಾನನು 19:11
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ಅಪೊಸ್ತಲರ ಕೃತ್ಯಗ 2:23
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೊಸ್ತಲರ ಕೃತ್ಯಗ 3:13
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೊಸ್ತಲರ ಕೃತ್ಯಗ 4:27
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು

1 ಥೆಸಲೊನೀಕದವರಿಗೆ 3:3
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.

ಇಬ್ರಿಯರಿಗೆ 2:1
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

ಇಬ್ರಿಯರಿಗೆ 12:2
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ

ಲೂಕನು 24:6
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

ಲೂಕನು 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕನು 2:51
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.

ಯೆಶಾಯ 32:9
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.

ಮತ್ತಾಯನು 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯನು 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

ಮತ್ತಾಯನು 20:18
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.

ಮತ್ತಾಯನು 21:38
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

ಮತ್ತಾಯನು 26:2
ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

ಮಾರ್ಕನು 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕನು 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

ಲೂಕನು 1:66
ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.

ಲೂಕನು 2:19
ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.

2 ಸಮುವೇಲನು 24:14
ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.