ಙ್ಞಾನೋಕ್ತಿಗಳು 17:14 in Kannada

ಕನ್ನಡ ಕನ್ನಡ ಬೈಬಲ್ ಙ್ಞಾನೋಕ್ತಿಗಳು ಙ್ಞಾನೋಕ್ತಿಗಳು 17 ಙ್ಞಾನೋಕ್ತಿಗಳು 17:14

Proverbs 17:14
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

Proverbs 17:13Proverbs 17Proverbs 17:15

Proverbs 17:14 in Other Translations

King James Version (KJV)
The beginning of strife is as when one letteth out water: therefore leave off contention, before it be meddled with.

American Standard Version (ASV)
The beginning of strife is `as' when one letteth out water: Therefore leave off contention, before there is quarrelling.

Bible in Basic English (BBE)
The start of fighting is like the letting out of water: so give up before it comes to blows.

Darby English Bible (DBY)
The beginning of contention is [as] when one letteth out water; therefore leave off strife before it become vehement.

World English Bible (WEB)
The beginning of strife is like breaching a dam, Therefore stop contention before quarreling breaks out.

Young's Literal Translation (YLT)
The beginning of contention `is' a letting out of waters, And before it is meddled with leave the strife.

The
beginning
פּ֣וֹטֵֽרpôṭērPOH-tare
of
strife
מַ֭יִםmayimMA-yeem
letteth
one
when
as
is
out
רֵאשִׁ֣יתrēʾšîtray-SHEET
water:
מָד֑וֹןmādônma-DONE
therefore
leave
off
וְלִפְנֵ֥יwĕlipnêveh-leef-NAY
contention,
הִ֝תְגַּלַּ֗עhitgallaʿHEET-ɡa-LA
before
הָרִ֥יבhārîbha-REEV
it
be
meddled
נְטֽוֹשׁ׃nĕṭôšneh-TOHSH

Cross Reference

ಙ್ಞಾನೋಕ್ತಿಗಳು 25:8
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.

ಙ್ಞಾನೋಕ್ತಿಗಳು 20:3
ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.

1 ಥೆಸಲೊನೀಕದವರಿಗೆ 4:11
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.

ಯಾಕೋಬನು 3:14
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಙ್ಞಾನೋಕ್ತಿಗಳು 26:21
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.

ಙ್ಞಾನೋಕ್ತಿಗಳು 29:22
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

ಪ್ರಸಂಗಿ 7:8
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.

ಮತ್ತಾಯನು 5:39
ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.

ಅಪೊಸ್ತಲರ ಕೃತ್ಯಗ 6:1
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.

ಅಪೊಸ್ತಲರ ಕೃತ್ಯಗ 15:2
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.

ರೋಮಾಪುರದವರಿಗೆ 12:18
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.

2 ತಿಮೊಥೆಯನಿಗೆ 2:23
ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಙ್ಞಾನೋಕ್ತಿಗಳು 19:11
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.

ಙ್ಞಾನೋಕ್ತಿಗಳು 17:19
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.

ಙ್ಞಾನೋಕ್ತಿಗಳು 16:32
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ನ್ಯಾಯಸ್ಥಾಪಕರು 8:1
ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.

ನ್ಯಾಯಸ್ಥಾಪಕರು 12:1
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.

2 ಸಮುವೇಲನು 2:14
ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.

2 ಸಮುವೇಲನು 19:41
ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

2 ಪೂರ್ವಕಾಲವೃತ್ತಾ 10:14
ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

2 ಪೂರ್ವಕಾಲವೃತ್ತಾ 13:17
ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.

2 ಪೂರ್ವಕಾಲವೃತ್ತಾ 25:17
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.

2 ಪೂರ್ವಕಾಲವೃತ್ತಾ 28:6
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.

ಙ್ಞಾನೋಕ್ತಿಗಳು 13:10
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.

ಙ್ಞಾನೋಕ್ತಿಗಳು 14:29
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.

ಙ್ಞಾನೋಕ್ತಿಗಳು 15:1
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.

ಆದಿಕಾಂಡ 13:8
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.