Acts 23:12
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
Acts 23:12 in Other Translations
King James Version (KJV)
And when it was day, certain of the Jews banded together, and bound themselves under a curse, saying that they would neither eat nor drink till they had killed Paul.
American Standard Version (ASV)
And when it was day, the Jews banded together, and bound themselves under a curse, saying that they would neither eat nor drink till they had killed Paul.
Bible in Basic English (BBE)
And when it was day, the Jews came together and put themselves under an oath that they would take no food or drink till they had put Paul to death.
Darby English Bible (DBY)
And when it was day, the Jews, having banded together, put themselves under a curse, saying that they would neither eat nor drink till they should kill Paul.
World English Bible (WEB)
When it was day, some of the Jews banded together, and bound themselves under a curse, saying that they would neither eat nor drink until they had killed Paul.
Young's Literal Translation (YLT)
And day having come, certain of the Jews having made a concourse, did anathematize themselves, saying neither to eat nor to drink till they may kill Paul;
| And | Γενομένης | genomenēs | gay-noh-MAY-nase |
| when it was | δὲ | de | thay |
| day, | ἡμέρας | hēmeras | ay-MAY-rahs |
| certain | ποιήσαντες | poiēsantes | poo-A-sahn-tase |
| the of | τινες | tines | tee-nase |
| Jews | τῶν | tōn | tone |
| banded | Ἰουδαίων | ioudaiōn | ee-oo-THAY-one |
| together, | συστροφὴν | systrophēn | syoo-stroh-FANE |
| curse, a under bound and | ἀνεθεμάτισαν | anethematisan | ah-nay-thay-MA-tee-sahn |
| themselves | ἑαυτοὺς | heautous | ay-af-TOOS |
| saying that | λέγοντες | legontes | LAY-gone-tase |
| they would neither | μήτε | mēte | MAY-tay |
| eat | φαγεῖν | phagein | fa-GEEN |
| nor | μήτε | mēte | MAY-tay |
| drink | πίειν | piein | PEE-een |
| till | ἕως | heōs | AY-ose |
| οὗ | hou | oo | |
| they had killed | ἀποκτείνωσιν | apokteinōsin | ah-poke-TEE-noh-seen |
| τὸν | ton | tone | |
| Paul. | Παῦλον | paulon | PA-lone |
Cross Reference
ಅಪೊಸ್ತಲರ ಕೃತ್ಯಗ 23:30
ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
ಅಪೊಸ್ತಲರ ಕೃತ್ಯಗ 23:21
ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
ಅಪೊಸ್ತಲರ ಕೃತ್ಯಗ 23:14
ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
ಯೆರೆಮಿಯ 11:19
ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
ಮತ್ತಾಯನು 26:4
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಮತ್ತಾಯನು 26:74
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.
ಮತ್ತಾಯನು 27:25
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಮಾರ್ಕನು 6:23
ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
ಅಪೊಸ್ತಲರ ಕೃತ್ಯಗ 25:3
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
1 ಕೊರಿಂಥದವರಿಗೆ 16:22
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
ಗಲಾತ್ಯದವರಿಗೆ 3:13
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಯೆಶಾಯ 8:9
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಕೀರ್ತನೆಗಳು 64:2
ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
ಕೀರ್ತನೆಗಳು 31:13
ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
ಯೆಹೋಶುವ 6:26
ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.
ಯೆಹೋಶುವ 7:1
1 ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಯೆಹೋಶುವ 7:15
ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
1 ಸಮುವೇಲನು 14:24
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
1 ಸಮುವೇಲನು 14:27
ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.
1 ಸಮುವೇಲನು 14:40
ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
1 ಅರಸುಗಳು 19:2
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
2 ಅರಸುಗಳು 6:31
ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
ನೆಹೆಮಿಯ 10:29
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ಕೀರ್ತನೆಗಳು 2:1
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಯಾಜಕಕಾಂಡ 27:29
ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.