ದಾನಿಯೇಲನು 8:11 in Kannada

ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 8 ದಾನಿಯೇಲನು 8:11

Daniel 8:11
ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;

Daniel 8:10Daniel 8Daniel 8:12

Daniel 8:11 in Other Translations

King James Version (KJV)
Yea, he magnified himself even to the prince of the host, and by him the daily sacrifice was taken away, and the place of the sanctuary was cast down.

American Standard Version (ASV)
Yea, it magnified itself, even to the prince of the host; and it took away from him the continual `burnt-offering', and the place of his sanctuary was cast down.

Bible in Basic English (BBE)
It made itself great, even as great as the lord of the army; and by it the regular burned offering was taken away, and the place overturned and the holy place made waste.

Darby English Bible (DBY)
(And he magnified [himself] even to the prince of the host, and from him the continual [sacrifice] was taken away, and the place of his sanctuary was cast down.

World English Bible (WEB)
Yes, it magnified itself, even to the prince of the host; and it took away from him the continual [burnt offering], and the place of his sanctuary was cast down.

Young's Literal Translation (YLT)
And unto the prince of the host it exerteth itself, and by it taken away hath been the continual `sacrifice', and thrown down the base of his sanctuary.

Yea,
he
magnified
וְעַ֥דwĕʿadveh-AD
himself
even
to
שַֽׂרśarsahr
prince
the
הַצָּבָ֖אhaṣṣābāʾha-tsa-VA
of
the
host,
הִגְדִּ֑ילhigdîlheeɡ-DEEL
and
by
וּמִמֶּ֙נּוּ֙ûmimmennûoo-mee-MEH-NOO
daily
the
him
הרּיַ֣םhrryamh-RAHM
sacrifice
was
taken
away,
הַתָּמִ֔ידhattāmîdha-ta-MEED
place
the
and
וְהֻשְׁלַ֖ךְwĕhušlakveh-hoosh-LAHK
of
his
sanctuary
מְכ֥וֹןmĕkônmeh-HONE
was
cast
down.
מִקְדָּשֽׁוֹ׃miqdāšômeek-da-SHOH

Cross Reference

ದಾನಿಯೇಲನು 12:11
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.

ದಾನಿಯೇಲನು 11:31
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.

ದಾನಿಯೇಲನು 8:25
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.

ಯೆಹೆಜ್ಕೇಲನು 46:14
ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.

ಯೆಶಾಯ 37:23
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?

2 ಅರಸುಗಳು 19:22
ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.

2 ಥೆಸಲೊನೀಕದವರಿಗೆ 2:4
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.

ಇಬ್ರಿಯರಿಗೆ 2:10
ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

ಪ್ರಕಟನೆ 13:5
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಪ್ರಕಟನೆ 17:14
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

ಪ್ರಕಟನೆ 19:13
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.

ಲೂಕನು 21:24
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

ಲೂಕನು 21:5
ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--

ದಾನಿಯೇಲನು 11:36
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.

ಅರಣ್ಯಕಾಂಡ 28:3
ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.

ಯೆಹೋಶುವ 5:14
ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.

2 ಪೂರ್ವಕಾಲವೃತ್ತಾ 32:15
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.

ಯೆಶಾಯ 37:29
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.

ಯೆರೆಮಿಯ 48:26
ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.

ಯೆರೆಮಿಯ 48:42
ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.

ದಾನಿಯೇಲನು 5:23
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.

ದಾನಿಯೇಲನು 7:25
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

ದಾನಿಯೇಲನು 8:12
ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.

ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

ವಿಮೋಚನಕಾಂಡ 29:38
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.