Genesis 45:5
ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
Genesis 45:5 in Other Translations
King James Version (KJV)
Now therefore be not grieved, nor angry with yourselves, that ye sold me hither: for God did send me before you to preserve life.
American Standard Version (ASV)
And now be not grieved, nor angry with yourselves, that ye sold me hither: for God did send me before you to preserve life.
Bible in Basic English (BBE)
Now do not be troubled or angry with yourselves for sending me away, because God sent me before you to be the saviour of your lives.
Darby English Bible (DBY)
And now, be not grieved, and be not angry with yourselves, that ye sold me hither, for God sent me before you to preserve life.
Webster's Bible (WBT)
Now therefore be not grieved, nor angry with yourselves, that ye sold me hither; for God sent me before you to preserve life.
World English Bible (WEB)
Now don't be grieved, nor angry with yourselves, that you sold me here, for God sent me before you to preserve life.
Young's Literal Translation (YLT)
and now, be not grieved, nor let it be displeasing in your eyes that ye sold me hither, for to preserve life hath God sent me before you.
| Now | וְעַתָּ֣ה׀ | wĕʿattâ | veh-ah-TA |
| therefore be not | אַל | ʾal | al |
| grieved, | תֵּעָ֣צְב֗וּ | tēʿāṣĕbû | tay-AH-tseh-VOO |
| nor | וְאַל | wĕʾal | veh-AL |
| angry | יִ֙חַר֙ | yiḥar | YEE-HAHR |
| with yourselves, | בְּעֵ֣ינֵיכֶ֔ם | bĕʿênêkem | beh-A-nay-HEM |
| that | כִּֽי | kî | kee |
| ye sold | מְכַרְתֶּ֥ם | mĕkartem | meh-hahr-TEM |
| hither: me | אֹתִ֖י | ʾōtî | oh-TEE |
| for | הֵ֑נָּה | hēnnâ | HAY-na |
| God | כִּ֣י | kî | kee |
| did send | לְמִֽחְיָ֔ה | lĕmiḥĕyâ | leh-mee-heh-YA |
| you before me | שְׁלָחַ֥נִי | šĕlāḥanî | sheh-la-HA-nee |
| to preserve life. | אֱלֹהִ֖ים | ʾĕlōhîm | ay-loh-HEEM |
| לִפְנֵיכֶֽם׃ | lipnêkem | leef-nay-HEM |
Cross Reference
ಆದಿಕಾಂಡ 50:20
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಯೋಬನು 1:21
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು.
ಆದಿಕಾಂಡ 45:7
ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
ಕೀರ್ತನೆಗಳು 105:16
ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
2 ಕೊರಿಂಥದವರಿಗೆ 2:11
ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
2 ಕೊರಿಂಥದವರಿಗೆ 2:7
ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
ಅಪೊಸ್ತಲರ ಕೃತ್ಯಗ 7:9
ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ಅಪೊಸ್ತಲರ ಕೃತ್ಯಗ 4:24
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
ಅಪೊಸ್ತಲರ ಕೃತ್ಯಗ 2:23
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಲೂಕನು 23:34
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
ಯೆಶಾಯ 40:1
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
2 ಸಮುವೇಲನು 17:14
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
2 ಸಮುವೇಲನು 16:10
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
2 ಸಮುವೇಲನು 12:12
ನೀನು ಅದನ್ನು ಮರೆಯಲ್ಲಿ ಮಾಡಿದಿ; ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲ್ಯರೆಲ್ಲರ ಮುಂದೆಯೂ ಸೂರ್ಯನ ಮುಂದೆಯೂ ಮಾಡುವೆನು ಅಂದನು.
1 ಸಮುವೇಲನು 1:19
ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
ಆದಿಕಾಂಡ 47:25
ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.