ಮತ್ತಾಯನು 20:30 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 20 ಮತ್ತಾಯನು 20:30

Matthew 20:30
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.

Matthew 20:29Matthew 20Matthew 20:31

Matthew 20:30 in Other Translations

King James Version (KJV)
And, behold, two blind men sitting by the way side, when they heard that Jesus passed by, cried out, saying, Have mercy on us, O Lord, thou son of David.

American Standard Version (ASV)
And behold, two blind men sitting by the way side, when they heard that Jesus was passing by, cried out, saying, Lord, have mercy on us, thou son of David.

Bible in Basic English (BBE)
And two blind men seated by the wayside, when they had the news that Jesus was going by, gave a loud cry, saying, Lord, Son of David, have mercy on us.

Darby English Bible (DBY)
And lo, two blind men, sitting by the wayside, having heard that Jesus was passing by, cried out saying, Have mercy on us, Lord, Son of David.

World English Bible (WEB)
Behold, two blind men sitting by the road, when they heard that Jesus was passing by, cried out, "Lord, have mercy on us, you son of David!"

Young's Literal Translation (YLT)
and lo, two blind men sitting by the way, having heard that Jesus doth pass by, cried, saying, `Deal kindly with us, sir -- Son of David.'

And,
καὶkaikay
behold,
ἰδού,idouee-THOO
two
δύοdyoTHYOO-oh
blind
men
τυφλοὶtyphloityoo-FLOO
sitting
καθήμενοιkathēmenoika-THAY-may-noo
by
παρὰparapa-RA
the
τὴνtēntane
side,
way
ὁδόν,hodonoh-THONE
when
they
heard
ἀκούσαντεςakousantesah-KOO-sahn-tase
that
ὅτιhotiOH-tee
Jesus
Ἰησοῦςiēsousee-ay-SOOS
by,
passed
παράγειparageipa-RA-gee
cried
out,
ἔκραξανekraxanA-kra-ksahn
saying,
λέγοντες,legontesLAY-gone-tase
Have
mercy
on
Ἐλέησονeleēsonay-LAY-ay-sone
us,
ἡμᾶς,hēmasay-MAHS
O
Lord,
κύριε,kyrieKYOO-ree-ay
thou
Son
υἱὸςhuiosyoo-OSE
of
David.
Δαβίδdabidtha-VEETH

Cross Reference

ಮತ್ತಾಯನು 22:42
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.

ಮತ್ತಾಯನು 21:9
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

ರೋಮಾಪುರದವರಿಗೆ 1:3
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;

ಅಪೊಸ್ತಲರ ಕೃತ್ಯಗ 2:30
ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

ಯೋಹಾನನು 9:1
ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಲೂಕನು 7:21
ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಮಾರ್ಕನು 10:46
ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.

ಮತ್ತಾಯನು 21:14
ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.

ಮತ್ತಾಯನು 15:22
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.

ಮತ್ತಾಯನು 12:22
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

ಮತ್ತಾಯನು 9:27
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.

ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಶಾಯ 59:10
ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.

ಯೆಶಾಯ 42:18
ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.

ಯೆಶಾಯ 42:16
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.

ಯೆಶಾಯ 35:5
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಯೆಶಾಯ 29:18
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

ಕೀರ್ತನೆಗಳು 146:8
ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;