ಮತ್ತಾಯನು 3:8 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 3 ಮತ್ತಾಯನು 3:8

Matthew 3:8
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

Matthew 3:7Matthew 3Matthew 3:9

Matthew 3:8 in Other Translations

King James Version (KJV)
Bring forth therefore fruits meet for repentance:

American Standard Version (ASV)
Bring forth therefore fruit worthy of repentance:

Bible in Basic English (BBE)
Let your change of heart be seen in your works:

Darby English Bible (DBY)
Produce therefore fruit worthy of repentance.

World English Bible (WEB)
Therefore bring forth fruit worthy of repentance!

Young's Literal Translation (YLT)
bear, therefore, fruits worthy of the reformation,

Bring
forth
ποιήσατεpoiēsatepoo-A-sa-tay
therefore
οὖνounoon
fruits
καρποὺςkarpouskahr-POOS
meet
ἀξίουςaxiousah-KSEE-oos

τῆςtēstase
for
repentance:
μετανοίαςmetanoiasmay-ta-NOO-as

Cross Reference

ಅಪೊಸ್ತಲರ ಕೃತ್ಯಗ 26:20
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ಎಫೆಸದವರಿಗೆ 5:9
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.

ಗಲಾತ್ಯದವರಿಗೆ 5:22
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

ಲೂಕನು 3:8
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

ಯೆರೆಮಿಯ 36:3
ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.

2 ಪೇತ್ರನು 1:4
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.

ಫಿಲಿಪ್ಪಿಯವರಿಗೆ 1:11
ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

2 ಕೊರಿಂಥದವರಿಗೆ 7:10
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.

ರೋಮಾಪುರದವರಿಗೆ 2:4
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ಲೂಕನು 3:10
ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.

ಮತ್ತಾಯನು 21:32
ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

ಮತ್ತಾಯನು 21:28
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

ಯೆರೆಮಿಯ 26:13
ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

ಯೆರೆಮಿಯ 7:3
ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.

ಯೆಶಾಯ 1:16
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;