ಮತ್ತಾಯನು 5:12 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 5 ಮತ್ತಾಯನು 5:12

Matthew 5:12
ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.

Matthew 5:11Matthew 5Matthew 5:13

Matthew 5:12 in Other Translations

King James Version (KJV)
Rejoice, and be exceeding glad: for great is your reward in heaven: for so persecuted they the prophets which were before you.

American Standard Version (ASV)
Rejoice, and be exceeding glad: for great is your reward in heaven: for so persecuted they the prophets that were before you.

Bible in Basic English (BBE)
Be glad and full of joy; for great is your reward in heaven: for so were the prophets attacked who were before you.

Darby English Bible (DBY)
Rejoice and exult, for your reward is great in the heavens; for thus have they persecuted the prophets who were before you.

World English Bible (WEB)
Rejoice, and be exceedingly glad, for great is your reward in heaven. For that is how they persecuted the prophets who were before you.

Young's Literal Translation (YLT)
rejoice ye and be glad, because your reward `is' great in the heavens, for thus did they persecute the prophets who were before you.

Rejoice,
χαίρετεchaireteHAY-ray-tay
and
καὶkaikay
be
exceeding
glad:
ἀγαλλιᾶσθεagalliastheah-gahl-lee-AH-sthay
for
ὅτιhotiOH-tee
great
hooh
is
your
μισθὸςmisthosmee-STHOSE

ὑμῶνhymōnyoo-MONE
reward
πολὺςpolyspoh-LYOOS
in
ἐνenane

τοῖςtoistoos
heaven:
οὐρανοῖς·ouranoisoo-ra-NOOS
for
οὕτωςhoutōsOO-tose
so
γὰρgargahr
persecuted
they
ἐδίωξανediōxanay-THEE-oh-ksahn
the
τοὺςtoustoos
prophets
προφήταςprophētasproh-FAY-tahs
which
were
τοὺςtoustoos
before
πρὸproproh
you.
ὑμῶνhymōnyoo-MONE

Cross Reference

ಲೂಕನು 6:23
ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.

1 ಪೇತ್ರನು 4:13
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.

ಯಾಕೋಬನು 1:2
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.

ರೋಮಾಪುರದವರಿಗೆ 5:3
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ

2 ಪೂರ್ವಕಾಲವೃತ್ತಾ 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ಮತ್ತಾಯನು 16:27
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.

ಕೊಲೊಸ್ಸೆಯವರಿಗೆ 1:24
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.

ಯೆರೆಮಿಯ 26:21
ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.

ಯೆಶಾಯ 3:10
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

ಫಿಲಿಪ್ಪಿಯವರಿಗೆ 2:17
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.

ಙ್ಞಾನೋಕ್ತಿಗಳು 11:18
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.

ಕೀರ್ತನೆಗಳು 58:11
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.

1 ಅರಸುಗಳು 22:26
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ

ಮತ್ತಾಯನು 6:16
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ

ಮತ್ತಾಯನು 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

ಅಪೊಸ್ತಲರ ಕೃತ್ಯಗ 5:41
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.

ಅಪೊಸ್ತಲರ ಕೃತ್ಯಗ 16:25
ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.

1 ಕೊರಿಂಥದವರಿಗೆ 3:8
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.

ಕೊಲೊಸ್ಸೆಯವರಿಗೆ 3:24
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.

1 ಥೆಸಲೊನೀಕದವರಿಗೆ 2:15
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

ಇಬ್ರಿಯರಿಗೆ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.

1 ಅರಸುಗಳು 18:13
ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?

ರೂತಳು 2:12
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್‌ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.

ಆದಿಕಾಂಡ 15:1
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.

ಯೆರೆಮಿಯ 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಲೂಕನು 6:35
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,

ನೆಹೆಮಿಯ 9:26
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.

2 ಪೂರ್ವಕಾಲವೃತ್ತಾ 24:20
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.

2 ಪೂರ್ವಕಾಲವೃತ್ತಾ 16:10
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

2 ಅರಸುಗಳು 1:9
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.

1 ಅರಸುಗಳು 22:8
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.

1 ಅರಸುಗಳು 21:20
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;

1 ಅರಸುಗಳು 19:10
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.

1 ಅರಸುಗಳು 19:2
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.

ಕೀರ್ತನೆಗಳು 19:11
ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.

ಯೆರೆಮಿಯ 26:8
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.

ಮತ್ತಾಯನು 6:1
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.

ಇಬ್ರಿಯರಿಗೆ 11:26
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.

ಅಪೊಸ್ತಲರ ಕೃತ್ಯಗ 7:51
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

2 ಕೊರಿಂಥದವರಿಗೆ 4:17
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.

ಲೂಕನು 13:34
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

ಲೂಕನು 11:47
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.

ಮತ್ತಾಯನು 23:31
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಮತ್ತಾಯನು 10:41
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.

ಮತ್ತಾಯನು 6:4
ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

1 ಅರಸುಗಳು 18:4
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)