Proverbs 15:27
ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
Proverbs 15:27 in Other Translations
King James Version (KJV)
He that is greedy of gain troubleth his own house; but he that hateth gifts shall live.
American Standard Version (ASV)
He that is greedy of gain troubleth his own house; But he that hateth bribes shall live.
Bible in Basic English (BBE)
He whose desires are fixed on profit is a cause of trouble to his family; but he who has no desire for offerings will have life.
Darby English Bible (DBY)
He that is greedy of gain troubleth his own house; but he that hateth gifts shall live.
World English Bible (WEB)
He who is greedy for gain troubles his own house, But he who hates bribes will live.
Young's Literal Translation (YLT)
A dishonest gainer is troubling his house, And whoso is hating gifts liveth.
| He that is greedy | עֹכֵ֣ר | ʿōkēr | oh-HARE |
| of gain | בֵּ֭יתוֹ | bêtô | BAY-toh |
| troubleth | בּוֹצֵ֣עַ | bôṣēaʿ | boh-TSAY-ah |
| house; own his | בָּ֑צַע | bāṣaʿ | BA-tsa |
| but he that hateth | וְשׂוֹנֵ֖א | wĕśônēʾ | veh-soh-NAY |
| gifts | מַתָּנֹ֣ת | mattānōt | ma-ta-NOTE |
| shall live. | יִחְיֶֽה׃ | yiḥye | yeek-YEH |
Cross Reference
ವಿಮೋಚನಕಾಂಡ 23:8
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
ಧರ್ಮೋಪದೇಶಕಾಂಡ 16:19
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
2 ಅರಸುಗಳು 5:27
ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ಙ್ಞಾನೋಕ್ತಿಗಳು 1:19
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ಙ್ಞಾನೋಕ್ತಿಗಳು 11:29
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
ಯೆರೆಮಿಯ 17:11
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
ಜೆಕರ್ಯ 5:3
ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ಹಬಕ್ಕೂಕ್ಕ 2:9
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಯೆಶಾಯ 33:15
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಯೆಶಾಯ 5:8
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಙ್ಞಾನೋಕ್ತಿಗಳು 29:4
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಧರ್ಮೋಪದೇಶಕಾಂಡ 7:26
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
ಯೆಹೋಶುವ 6:18
ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
ಯೆಹೋಶುವ 7:11
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಯೆಹೋಶುವ 7:24
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
1 ಸಮುವೇಲನು 8:3
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
ಙ್ಞಾನೋಕ್ತಿಗಳು 11:19
ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
ಙ್ಞಾನೋಕ್ತಿಗಳು 20:21
ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
ಙ್ಞಾನೋಕ್ತಿಗಳು 28:16
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
ವಿಮೋಚನಕಾಂಡ 18:21
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.