Kannada Bible

Proverbs 24:23-33 in Kannada

Proverbs 24:23
ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.

Proverbs 24:24
ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.

Proverbs 24:25
ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.

Proverbs 24:26
ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.

Proverbs 24:27
ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.

Proverbs 24:28
ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.

Proverbs 24:29
ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.

Proverbs 24:30
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;

Proverbs 24:31
ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.

Proverbs 24:32
ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.

Proverbs 24:33
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;