ರೋಮಾಪುರದವರಿಗೆ 3:21 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 3 ರೋಮಾಪುರದವರಿಗೆ 3:21

Romans 3:21
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.

Romans 3:20Romans 3Romans 3:22

Romans 3:21 in Other Translations

King James Version (KJV)
But now the righteousness of God without the law is manifested, being witnessed by the law and the prophets;

American Standard Version (ASV)
But now apart from the law a righteousness of God hath been manifested, being witnessed by the law and the prophets;

Bible in Basic English (BBE)
But now without the law there is a revelation of the righteousness of God, to which witness is given by the law and the prophets;

Darby English Bible (DBY)
But now without law righteousness of God is manifested, borne witness to by the law and the prophets;

World English Bible (WEB)
But now apart from the law, a righteousness of God has been revealed, being testified by the law and the prophets;

Young's Literal Translation (YLT)
And now apart from law hath the righteousness of God been manifested, testified to by the law and the prophets,

But
Νυνὶnyninyoo-NEE
now
δὲdethay
the
righteousness
χωρὶςchōrishoh-REES
God
of
νόμουnomouNOH-moo
without
δικαιοσύνηdikaiosynēthee-kay-oh-SYOO-nay
the
law
θεοῦtheouthay-OO
manifested,
is
πεφανέρωταιpephanerōtaipay-fa-NAY-roh-tay
being
witnessed
μαρτυρουμένηmartyroumenēmahr-tyoo-roo-MAY-nay
by
ὑπὸhypoyoo-POH
the
τοῦtoutoo
law
νόμουnomouNOH-moo
and
καὶkaikay
the
τῶνtōntone
prophets;
προφητῶνprophētōnproh-fay-TONE

Cross Reference

ಅಪೊಸ್ತಲರ ಕೃತ್ಯಗ 10:43
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ಯೆರೆಮಿಯ 33:16
ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.

ರೋಮಾಪುರದವರಿಗೆ 1:17
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ರೋಮಾಪುರದವರಿಗೆ 1:2
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).

ಯೆಶಾಯ 45:24
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.

ಯೆಶಾಯ 46:13
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.

ಯೆಶಾಯ 51:8
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.

ಯೆಶಾಯ 61:10
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.

ಯೆರೆಮಿಯ 23:5
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ರೋಮಾಪುರದವರಿಗೆ 5:19
ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.

ರೋಮಾಪುರದವರಿಗೆ 16:26
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.

2 ಪೇತ್ರನು 1:1
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

1 ಪೇತ್ರನು 1:10
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ಇಬ್ರಿಯರಿಗೆ 11:4
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.

ಇಬ್ರಿಯರಿಗೆ 10:1
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಫಿಲಿಪ್ಪಿಯವರಿಗೆ 3:9
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

ಗಲಾತ್ಯದವರಿಗೆ 5:5
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.

ಗಲಾತ್ಯದವರಿಗೆ 3:8
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಧರ್ಮೋಪದೇಶಕಾಂಡ 18:15
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--

ಯೆಶಾಯ 54:17
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.

ಲೂಕನು 24:44
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನನು 1:45
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.

ಯೋಹಾನನು 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಯೋಹಾನನು 5:46
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.

ಅಪೊಸ್ತಲರ ಕೃತ್ಯಗ 3:21
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

ಅಪೊಸ್ತಲರ ಕೃತ್ಯಗ 15:11
ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.

ಅಪೊಸ್ತಲರ ಕೃತ್ಯಗ 26:22
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ಅಪೊಸ್ತಲರ ಕೃತ್ಯಗ 28:23
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

ರೋಮಾಪುರದವರಿಗೆ 5:21
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 9:30
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ರೋಮಾಪುರದವರಿಗೆ 10:3
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

1 ಕೊರಿಂಥದವರಿಗೆ 1:30
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.

2 ಕೊರಿಂಥದವರಿಗೆ 5:21
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಆದಿಕಾಂಡ 15:6
ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.