Acts 8:22 ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
Acts 8:22 in Other Translations
King James Version (KJV) Repent therefore of this thy wickedness, and pray God, if perhaps the thought of thine heart may be forgiven thee.
American Standard Version (ASV) Repent therefore of this thy wickedness, and pray the Lord, if perhaps the thought of thy heart shall be forgiven thee.
Bible in Basic English (BBE) Let your heart be changed, and make prayer to God that you may have forgiveness for your evil thoughts.
Darby English Bible (DBY) Repent therefore of this thy wickedness, and supplicate the Lord, if indeed the thought of thy heart may be forgiven thee;
World English Bible (WEB) Repent therefore of this, your wickedness, and ask God if perhaps the thought of your heart may be forgiven you.
Young's Literal Translation (YLT) reform, therefore, from this thy wickedness, and beseech God, if then the purpose of thy heart may be forgiven thee,
Repent
μετανόησον
metanoeō
may-ta-noh-A-oh
therefore
οὖν
oun
oon
of
ἀπὸ
apo
ah-POH
τῆς
ho
oh
wickedness,
κακίας
kakia
ka-KEE-ah
thy
σου
sou
soo
this
ταύτης
houtos
OO-tose
and
καὶ
kai
kay
pray
δεήθητι
deomai
THAY-oh-may
τοῦ
ho
oh
God,
Θεοῦ,
theos
thay-OSE
if
εἰ
ei
ee
perhaps
ἄρα
ara
AH-ra
may be forgiven
ἀφεθήσεταί
aphiēmi
ah-FEE-ay-mee
thee.
σοι
soi
soo
the
ἡ
ho
oh
thought
ἐπίνοια
epinoia
ay-PEE-noo-ah
τῆς
ho
oh
heart
καρδίας
kardia
kahr-THEE-ah
of thine
σου
sou
soo
Read Full Chapter :
Acts 8
Cross Reference
ದಾನಿಯೇಲನು 4:27
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
1 ಅರಸುಗಳು 8:47
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
2 ಪೂರ್ವಕಾಲವೃತ್ತಾ 33:12
ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.
ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಯೋವೇಲ 2:13
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಆಮೋಸ 5:6
ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ಆಮೋಸ 5:15
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
ಯೋನ 1:6
ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
ಯೋನ 3:9
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.
ಮತ್ತಾಯನು 7:7
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಲೂಕನು 11:9
ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
ಧರ್ಮೋಪದೇಶಕಾಂಡ 4:29
ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
ಅಪೊಸ್ತಲರ ಕೃತ್ಯಗ 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಅಪೊಸ್ತಲರ ಕೃತ್ಯಗ 8:20
ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
ಅಪೊಸ್ತಲರ ಕೃತ್ಯಗ 9:11
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
ಅಪೊಸ್ತಲರ ಕೃತ್ಯಗ 17:30
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ರೋಮಾಪುರದವರಿಗೆ 2:4
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
2 ತಿಮೊಥೆಯನಿಗೆ 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.
ಇಬ್ರಿಯರಿಗೆ 4:12
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಪ್ರಕಟನೆ 2:21
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
ಪ್ರಕಟನೆ 3:17
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.