Acts 26:18 in Kannada

Kannada Kannada Bible Acts Acts 26 Acts 26:18

Acts 26:18
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

Acts 26:17Acts 26Acts 26:19

Acts 26:18 in Other Translations

King James Version (KJV)
To open their eyes, and to turn them from darkness to light, and from the power of Satan unto God, that they may receive forgiveness of sins, and inheritance among them which are sanctified by faith that is in me.

American Standard Version (ASV)
to open their eyes, that they may turn from darkness to light and from the power of Satan unto God, that they may receive remission of sins and an inheritance among them that are sanctified by faith in me.

Bible in Basic English (BBE)
To make their eyes open, turning them from the dark to the light, and from the power of Satan to God, so that they may have forgiveness of sins and a heritage among those who are made holy by faith in me.

Darby English Bible (DBY)
to open their eyes, that they may turn from darkness to light, and from the power of Satan to God, that they may receive remission of sins and inheritance among them that are sanctified by faith in me.

World English Bible (WEB)
to open their eyes, that they may turn from darkness to light and from the power of Satan to God, that they may receive remission of sins and an inheritance among those who are sanctified by faith in me.'

Young's Literal Translation (YLT)
to open their eyes, to turn `them' from darkness to light, and `from' the authority of the Adversary unto God, for their receiving forgiveness of sins, and a lot among those having been sanctified, by faith that `is' toward me.

To
open
ἀνοῖξαιanoixaiah-NOO-ksay
their
ὀφθαλμοὺςophthalmousoh-fthahl-MOOS
eyes,
αὐτῶνautōnaf-TONE

and
τοῦtoutoo
to
turn
ἐπιστρέψαιepistrepsaiay-pee-STRAY-psay
them
from
ἀπὸapoah-POH
darkness
σκότουςskotousSKOH-toos
to
εἰςeisees
light,
φῶςphōsfose
and
καὶkaikay
from
the
τῆςtēstase
power
ἐξουσίαςexousiasayks-oo-SEE-as
of

τοῦtoutoo
Satan
Σατανᾶsatanasa-ta-NA
unto
ἐπὶepiay-PEE

τὸνtontone
God,
θεόνtheonthay-ONE
that
τοῦtoutoo
they
λαβεῖνlabeinla-VEEN
may
receive
αὐτοὺςautousaf-TOOS
forgiveness
ἄφεσινaphesinAH-fay-seen
of
sins,
ἁμαρτιῶνhamartiōna-mahr-tee-ONE
and
καὶkaikay
inheritance
κλῆρονklēronKLAY-rone
among
ἐνenane
them
which
τοῖςtoistoos
are
sanctified
ἡγιασμένοιςhēgiasmenoisay-gee-ah-SMAY-noos
faith
by
πίστειpisteiPEE-stee
that
τῇtay
is
in
εἰςeisees
me.
ἐμέemeay-MAY

Cross Reference

ಅಪೊಸ್ತಲರ ಕೃತ್ಯಗ 20:32
ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.

1 ಪೇತ್ರನು 2:9
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

ಎಫೆಸದವರಿಗೆ 1:18
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ

ಯೆಶಾಯ 42:7
ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

2 ಕೊರಿಂಥದವರಿಗೆ 4:6
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

ಎಫೆಸದವರಿಗೆ 5:8
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಯೆಶಾಯ 35:5
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಲೂಕನು 1:79
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.

ಯೋಹಾನನು 8:12
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 20:21
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

2 ಕೊರಿಂಥದವರಿಗೆ 4:4
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.

ಅಪೊಸ್ತಲರ ಕೃತ್ಯಗ 5:31
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ಕೊಲೊಸ್ಸೆಯವರಿಗೆ 1:12
ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.

1 ಥೆಸಲೊನೀಕದವರಿಗೆ 5:4
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೊಸ್ತಲರ ಕೃತ್ಯಗ 15:9
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

2 ಕೊರಿಂಥದವರಿಗೆ 6:14
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?

ಎಫೆಸದವರಿಗೆ 4:18
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.

1 ಯೋಹಾನನು 1:9
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.

1 ಯೋಹಾನನು 2:8
ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

1 ಯೋಹಾನನು 3:8
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.

ಲೂಕನು 1:77
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಇಬ್ರಿಯರಿಗೆ 10:14
ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.

ಇಬ್ರಿಯರಿಗೆ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.

ಯಾಕೋಬನು 2:5
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

1 ಪೇತ್ರನು 1:4
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

1 ಪೇತ್ರನು 2:25
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 ಯೋಹಾನನು 2:12
ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.

1 ಯೋಹಾನನು 5:19
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.

ಯೂದನು 1:1
ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--

ಪ್ರಕಟನೆ 20:2
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.

ಪ್ರಕಟನೆ 21:27
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

ಎಫೆಸದವರಿಗೆ 1:11
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.

ಎಫೆಸದವರಿಗೆ 1:14
ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.

ಎಫೆಸದವರಿಗೆ 2:8
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ಎಫೆಸದವರಿಗೆ 5:14
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.

2 ತಿಮೊಥೆಯನಿಗೆ 2:26
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

ತೀತನಿಗೆ 3:5
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

ಇಬ್ರಿಯರಿಗೆ 2:14
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

ಇಬ್ರಿಯರಿಗೆ 9:15
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.

ಇಬ್ರಿಯರಿಗೆ 10:10
ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.

ಯೆಶಾಯ 49:6
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಎಫೆಸದವರಿಗೆ 1:7
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.

ಗಲಾತ್ಯದವರಿಗೆ 3:14
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.

ಕೀರ್ತನೆಗಳು 32:1
ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

ಮಲಾಕಿಯ 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.

ಮತ್ತಾಯನು 4:16
ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.

ಮತ್ತಾಯನು 6:22
ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.

ಲೂಕನು 2:32
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.

ಲೂಕನು 4:18
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ

ಲೂಕನು 11:21
ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.

ಲೂಕನು 24:45
ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.

ಯೋಹಾನನು 1:4
ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.

ಯೆಶಾಯ 60:1
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಯೆಶಾಯ 53:8
ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.

ಕೀರ್ತನೆಗಳು 119:18
ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.

ಕೀರ್ತನೆಗಳು 146:8
ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;

ಯೆಶಾಯ 9:2
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.

ಯೆಶಾಯ 29:18
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

ಯೆಶಾಯ 32:3
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.

ಯೆಶಾಯ 42:16
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.

ಯೆಶಾಯ 43:8
ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

ಯೆಶಾಯ 49:24
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ?

ಯೋಹಾನನು 3:19
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

ಯೋಹಾನನು 4:10
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.

ಯೋಹಾನನು 4:14
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.

ಅಪೊಸ್ತಲರ ಕೃತ್ಯಗ 26:23
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.

ರೋಮಾಪುರದವರಿಗೆ 4:6
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.

ರೋಮಾಪುರದವರಿಗೆ 5:1
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.

ರೋಮಾಪುರದವರಿಗೆ 8:17
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

1 ಕೊರಿಂಥದವರಿಗೆ 1:2
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ

1 ಕೊರಿಂಥದವರಿಗೆ 1:30
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.

1 ಕೊರಿಂಥದವರಿಗೆ 6:10
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

ಗಲಾತ್ಯದವರಿಗೆ 2:20
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ

ಅಪೊಸ್ತಲರ ಕೃತ್ಯಗ 13:47
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

ಅಪೊಸ್ತಲರ ಕೃತ್ಯಗ 13:38
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ

ಯೋಹಾನನು 7:38
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

ಯೋಹಾನನು 9:5
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.

ಯೋಹಾನನು 9:39
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.

ಯೋಹಾನನು 12:35
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಯೋಹಾನನು 17:17
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು

ಅಪೊಸ್ತಲರ ಕೃತ್ಯಗ 3:19
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೊಸ್ತಲರ ಕೃತ್ಯಗ 9:17
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 10:43
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ಗಲಾತ್ಯದವರಿಗೆ 3:2
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?