Genesis 2:17 in Kannada

Kannada Kannada Bible Genesis Genesis 2 Genesis 2:17

Genesis 2:17
ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.

Genesis 2:16Genesis 2Genesis 2:18

Genesis 2:17 in Other Translations

King James Version (KJV)
But of the tree of the knowledge of good and evil, thou shalt not eat of it: for in the day that thou eatest thereof thou shalt surely die.

American Standard Version (ASV)
but of the tree of the knowledge of good and evil, thou shalt not eat of it: for in the day that thou eatest thereof thou shalt surely die.

Bible in Basic English (BBE)
But of the fruit of the tree of the knowledge of good and evil you may not take; for on the day when you take of it, death will certainly come to you.

Darby English Bible (DBY)
but of the tree of the knowledge of good and evil, thou shalt not eat of it; for in the day that thou eatest of it thou shalt certainly die.

Webster's Bible (WBT)
But of the tree of the knowledge of good and evil, thou shalt not eat of it: for in the day that thou eatest of it thou shalt surely die.

World English Bible (WEB)
but of the tree of the knowledge of good and evil, you shall not eat of it: for in the day that you eat of it you will surely die."

Young's Literal Translation (YLT)
and of the tree of knowledge of good and evil, thou dost not eat of it, for in the day of thine eating of it -- dying thou dost die.'

But
of
the
tree
וּמֵעֵ֗ץûmēʿēṣoo-may-AYTS
of
the
knowledge
הַדַּ֙עַת֙haddaʿatha-DA-AT
good
of
ט֣וֹבṭôbtove
and
evil,
וָרָ֔עwārāʿva-RA
thou
shalt
not
לֹ֥אlōʾloh
eat
תֹאכַ֖לtōʾkaltoh-HAHL
of
מִמֶּ֑נּוּmimmennûmee-MEH-noo
it:
for
כִּ֗יkee
in
the
day
בְּי֛וֹםbĕyômbeh-YOME
eatest
thou
that
אֲכָלְךָ֥ʾăkolkāuh-hole-HA
thereof
מִמֶּ֖נּוּmimmennûmee-MEH-noo
thou
shalt
surely
מ֥וֹתmôtmote
die.
תָּמֽוּת׃tāmûtta-MOOT

Cross Reference

ಯಾಕೋಬನು 1:15
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.

ರೋಮಾಪುರದವರಿಗೆ 6:23
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.

ಆದಿಕಾಂಡ 3:19
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.

ಕೊಲೊಸ್ಸೆಯವರಿಗೆ 2:13
ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

ಯೆಹೆಜ್ಕೇಲನು 18:4
ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.

ರೋಮಾಪುರದವರಿಗೆ 8:2
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.

ರೋಮಾಪುರದವರಿಗೆ 1:32
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.

ಯೆಹೆಜ್ಕೇಲನು 33:14
ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ

ಯೆಹೆಜ್ಕೇಲನು 18:32
ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

ಆದಿಕಾಂಡ 3:17
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.

ಯೆಹೆಜ್ಕೇಲನು 3:18
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.

ಯೆಹೆಜ್ಕೇಲನು 33:8
ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.

1 ಕೊರಿಂಥದವರಿಗೆ 15:56
ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.

1 ಕೊರಿಂಥದವರಿಗೆ 15:22
ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.

ಪ್ರಕಟನೆ 20:14
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.

ಪ್ರಕಟನೆ 21:8
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

1 ತಿಮೊಥೆಯನಿಗೆ 5:6
ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.

ಎಫೆಸದವರಿಗೆ 2:1
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.

ಗಲಾತ್ಯದವರಿಗೆ 3:10
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ಆದಿಕಾಂಡ 3:11
ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು

1 ಅರಸುಗಳು 2:42
ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?

ಪ್ರಕಟನೆ 20:6
ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.

ಪ್ರಕಟನೆ 2:11
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

1 ಯೋಹಾನನು 5:16
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ

ಆದಿಕಾಂಡ 2:9
ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.

ಆದಿಕಾಂಡ 3:1
ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.

ಆದಿಕಾಂಡ 20:7
ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

ಅರಣ್ಯಕಾಂಡ 26:65
ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.

ಧರ್ಮೋಪದೇಶಕಾಂಡ 27:26
ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

ಧರ್ಮೋಪದೇಶಕಾಂಡ 30:15
ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.

ಧರ್ಮೋಪದೇಶಕಾಂಡ 30:19
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

1 ಸಮುವೇಲನು 14:39
ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.

1 ಸಮುವೇಲನು 14:44
ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.

ಎಫೆಸದವರಿಗೆ 5:14
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.

ರೋಮಾಪುರದವರಿಗೆ 7:10
ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.

ರೋಮಾಪುರದವರಿಗೆ 6:16
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.

ರೋಮಾಪುರದವರಿಗೆ 5:12
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

1 ಅರಸುಗಳು 2:37
ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.

1 ಸಮುವೇಲನು 22:16
ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು.

1 ಸಮುವೇಲನು 20:31
ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.

ಯೆಹೆಜ್ಕೇಲನು 18:13
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.

ಯೆರೆಮಿಯ 26:8
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.