Genesis 9:6 in Kannada

Kannada Kannada Bible Genesis Genesis 9 Genesis 9:6

Genesis 9:6
ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

Genesis 9:5Genesis 9Genesis 9:7

Genesis 9:6 in Other Translations

King James Version (KJV)
Whoso sheddeth man's blood, by man shall his blood be shed: for in the image of God made he man.

American Standard Version (ASV)
Whoso sheddeth man's blood, by man shall his blood be shed: For in the image of God made he man.

Bible in Basic English (BBE)
Whoever takes a man's life, by man will his life be taken; because God made man in his image.

Darby English Bible (DBY)
Whoso sheddeth Man's blood, by Man shall his blood be shed; for in the image of God he hath made Man.

Webster's Bible (WBT)
Whoever sheddeth man's blood, by man shall his blood be shed: for in the image of God made he man.

World English Bible (WEB)
Whoever sheds man's blood, by man will his blood be shed, for in the image of God made he man.

Young's Literal Translation (YLT)
whoso sheddeth man's blood, by man is his blood shed: for in the image of God hath He made man.

Whoso
sheddeth
שֹׁפֵךְ֙šōpēkshoh-fake
man's
דַּ֣םdamdahm
blood,
הָֽאָדָ֔םhāʾādāmha-ah-DAHM
man
by
בָּֽאָדָ֖םbāʾādāmba-ah-DAHM
shall
his
blood
דָּמ֣וֹdāmôda-MOH
shed:
be
יִשָּׁפֵ֑ךְyiššāpēkyee-sha-FAKE
for
כִּ֚יkee
in
the
image
בְּצֶ֣לֶםbĕṣelembeh-TSEH-lem
God
of
אֱלֹהִ֔יםʾĕlōhîmay-loh-HEEM
made
עָשָׂ֖הʿāśâah-SA
he

אֶתʾetet
man.
הָֽאָדָֽם׃hāʾādāmHA-ah-DAHM

Cross Reference

ಯಾಜಕಕಾಂಡ 24:17
ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.

ಪ್ರಕಟನೆ 13:10
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.

ಮತ್ತಾಯನು 26:52
ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.

ವಿಮೋಚನಕಾಂಡ 21:12
ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

ಆದಿಕಾಂಡ 1:26
ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಯಾಕೋಬನು 3:9
ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.

ಅರಣ್ಯಕಾಂಡ 35:33
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.

ಆದಿಕಾಂಡ 5:1
ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.

ರೋಮಾಪುರದವರಿಗೆ 13:4
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.

ಕೀರ್ತನೆಗಳು 51:4
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.

1 ಅರಸುಗಳು 2:28
ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.

1 ಅರಸುಗಳು 2:5
ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

ಅರಣ್ಯಕಾಂಡ 35:25
ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.

ಯಾಜಕಕಾಂಡ 17:4
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.

ವಿಮೋಚನಕಾಂಡ 22:2
ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.

ಆದಿಕಾಂಡ 4:14
ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.