James 1:19 in Kannada

Kannada Kannada Bible James James 1 James 1:19

James 1:19
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.

James 1:18James 1James 1:20

James 1:19 in Other Translations

King James Version (KJV)
Wherefore, my beloved brethren, let every man be swift to hear, slow to speak, slow to wrath:

American Standard Version (ASV)
Ye know `this', my beloved brethren. But let every man be swift to hear, slow to speak, slow to wrath:

Bible in Basic English (BBE)
You have knowledge of this, dear brothers. But let every man be quick in hearing, slow in words, slow to get angry;

Darby English Bible (DBY)
So that, my beloved brethren, let every man be swift to hear, slow to speak, slow to wrath;

World English Bible (WEB)
So, then, my beloved brothers, let every man be swift to hear, slow to speak, and slow to anger;

Young's Literal Translation (YLT)
So then, my brethren beloved, let every man be swift to hear, slow to speak, slow to anger,

Wherefore,
Ὥστε,hōsteOH-stay
my
ἀδελφοίadelphoiah-thale-FOO
beloved
μουmoumoo
brethren,
ἀγαπητοί·agapētoiah-ga-pay-TOO
let
every
ἔστωestōA-stoh
man
πᾶςpaspahs
be
ἄνθρωποςanthrōposAN-throh-pose
swift
ταχὺςtachysta-HYOOS
to
εἰςeisees

τὸtotoh
hear,
ἀκοῦσαιakousaiah-KOO-say
slow
βραδὺςbradysvra-THYOOS
to
εἰςeisees

τὸtotoh
speak,
λαλῆσαιlalēsaila-LAY-say
slow
βραδὺςbradysvra-THYOOS
to
εἰςeisees
wrath:
ὀργήν·orgēnore-GANE

Cross Reference

ಙ್ಞಾನೋಕ್ತಿಗಳು 17:27
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.

ಙ್ಞಾನೋಕ್ತಿಗಳು 10:19
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.

ಙ್ಞಾನೋಕ್ತಿಗಳು 21:23
ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.

ಙ್ಞಾನೋಕ್ತಿಗಳು 13:3
ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.

ಙ್ಞಾನೋಕ್ತಿಗಳು 18:13
ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.

ಙ್ಞಾನೋಕ್ತಿಗಳು 14:29
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.

ಙ್ಞಾನೋಕ್ತಿಗಳು 16:32
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.

ಎಫೆಸದವರಿಗೆ 4:26
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;

ಕೊಲೊಸ್ಸೆಯವರಿಗೆ 3:8
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.

ಪ್ರಸಂಗಿ 5:1
ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.

ಙ್ಞಾನೋಕ್ತಿಗಳು 15:18
ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.

ಙ್ಞಾನೋಕ್ತಿಗಳು 17:14
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.

ಪ್ರಸಂಗಿ 7:8
ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.

ಙ್ಞಾನೋಕ್ತಿಗಳು 15:2
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.

ಙ್ಞಾನೋಕ್ತಿಗಳು 19:11
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.

ಙ್ಞಾನೋಕ್ತಿಗಳು 25:28
ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.

ಎಫೆಸದವರಿಗೆ 4:31
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.

ಕೊಲೊಸ್ಸೆಯವರಿಗೆ 3:15
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.

ಙ್ಞಾನೋಕ್ತಿಗಳು 14:17
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.

ಙ್ಞಾನೋಕ್ತಿಗಳು 18:21
ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.

ಮತ್ತಾಯನು 5:22
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಅಪೊಸ್ತಲರ ಕೃತ್ಯಗ 10:33
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

1 ಥೆಸಲೊನೀಕದವರಿಗೆ 2:13
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.

ಅಪೊಸ್ತಲರ ಕೃತ್ಯಗ 17:11
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

ನೆಹೆಮಿಯ 9:17
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.

ಙ್ಞಾನೋಕ್ತಿಗಳು 8:32
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ಯಾಕೋಬನು 3:1
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.

ನೆಹೆಮಿಯ 8:2
ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ

ನೆಹೆಮಿಯ 8:18
ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.

ನೆಹೆಮಿಯ 9:3
ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.

ಙ್ಞಾನೋಕ್ತಿಗಳು 19:19
ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.

ಮಾರ್ಕನು 2:2
ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;

ಮಾರ್ಕನು 12:37
ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.

ಲೂಕನು 19:48
ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.

ಅಪೊಸ್ತಲರ ಕೃತ್ಯಗ 2:42
ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.

ಅಪೊಸ್ತಲರ ಕೃತ್ಯಗ 13:42
ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

ಅಪೊಸ್ತಲರ ಕೃತ್ಯಗ 13:48
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

ಗಲಾತ್ಯದವರಿಗೆ 5:20
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು

ಯಾಕೋಬನು 1:26
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.

1 ಯೋಹಾನನು 2:21
ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.

ಲೂಕನು 15:1
​ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.

ನೆಹೆಮಿಯ 8:12
ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.