Psalm 85:8 in Kannada

Kannada Kannada Bible Psalm Psalm 85 Psalm 85:8

Psalm 85:8
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.

Psalm 85:7Psalm 85Psalm 85:9

Psalm 85:8 in Other Translations

King James Version (KJV)
I will hear what God the LORD will speak: for he will speak peace unto his people, and to his saints: but let them not turn again to folly.

American Standard Version (ASV)
I will hear what God Jehovah will speak; For he will speak peace unto his people, and to his saints: But let them not turn again to folly.

Bible in Basic English (BBE)
I will give ear to the voice of the Lord; for he will say words of peace to his people and to his saints; but let them not go back to their foolish ways.

Darby English Bible (DBY)
I will hear what ùGod, Jehovah, will speak; for he will speak peace unto his people, and to his godly ones: but let them not turn again to folly.

Webster's Bible (WBT)
Show us thy mercy, O LORD, and grant us thy salvation.

World English Bible (WEB)
I will hear what God, Yahweh, will speak, For he will speak peace to his people, his saints; But let them not turn again to folly.

Young's Literal Translation (YLT)
I hear what God Jehovah speaketh, For He speaketh peace unto His people, And unto His saints, and they turn not back to folly.

I
will
hear
אֶשְׁמְעָ֗הʾešmĕʿâesh-meh-AH
what
מַהmama
God
יְדַבֵּר֮yĕdabbēryeh-da-BARE
the
Lord
הָאֵ֪ל׀hāʾēlha-ALE
speak:
will
יְה֫וָ֥הyĕhwâYEH-VA
for
כִּ֤י׀kee
he
will
speak
יְדַבֵּ֬רyĕdabbēryeh-da-BARE
peace
שָׁל֗וֹםšālômsha-LOME
unto
אֶלʾelel
his
people,
עַמּ֥וֹʿammôAH-moh
and
to
וְאֶלwĕʾelveh-EL
his
saints:
חֲסִידָ֑יוḥăsîdāywhuh-see-DAV
not
them
let
but
וְֽאַלwĕʾalVEH-al
turn
again
יָשׁ֥וּבוּyāšûbûya-SHOO-voo
to
folly.
לְכִסְלָֽה׃lĕkislâleh-hees-LA

Cross Reference

ಜೆಕರ್ಯ 9:10
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

ಇಬ್ರಿಯರಿಗೆ 10:26
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

2 ತಿಮೊಥೆಯನಿಗೆ 2:19
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

ಹಬಕ್ಕೂಕ್ಕ 2:1
ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.

ಕೀರ್ತನೆಗಳು 29:11
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.

ಗಲಾತ್ಯದವರಿಗೆ 4:9
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?

ಎಫೆಸದವರಿಗೆ 1:1
ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--

ಎಫೆಸದವರಿಗೆ 2:17
ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.

2 ಥೆಸಲೊನೀಕದವರಿಗೆ 3:16
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.

ಇಬ್ರಿಯರಿಗೆ 12:25
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

2 ಪೇತ್ರನು 2:20
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

ಪ್ರಕಟನೆ 2:4
ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.

ಪ್ರಕಟನೆ 3:19
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.

2 ಕೊರಿಂಥದವರಿಗೆ 5:18
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

ಅಪೊಸ್ತಲರ ಕೃತ್ಯಗ 10:36
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

ಅಪೊಸ್ತಲರ ಕೃತ್ಯಗ 3:26
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಆದಿಕಾಂಡ 34:7
ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.

ಕೀರ್ತನೆಗಳು 50:5
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.

ಕೀರ್ತನೆಗಳು 130:4
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.

ಙ್ಞಾನೋಕ್ತಿಗಳು 25:11
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.

ಙ್ಞಾನೋಕ್ತಿಗಳು 27:22
ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.

ಯೆಶಾಯ 57:19
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

ಹಗ್ಗಾಯ 2:9
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಯೋಹಾನನು 5:14
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.

ಯೋಹಾನನು 8:11
ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.

ಯೋಹಾನನು 14:27
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

ಯೋಹಾನನು 20:19
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

ಯೋಹಾನನು 20:26
ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.

1 ಸಮುವೇಲನು 25:25
ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.