Zechariah 13:8 in Kannada

Kannada Kannada Bible Zechariah Zechariah 13 Zechariah 13:8

Zechariah 13:8
ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.

Zechariah 13:7Zechariah 13Zechariah 13:9

Zechariah 13:8 in Other Translations

King James Version (KJV)
And it shall come to pass, that in all the land, saith the LORD, two parts therein shall be cut off and die; but the third shall be left therein.

American Standard Version (ASV)
And it shall come to pass, that in all the land, saith Jehovah, two parts therein shall be cut off and die; but the third shall be left therein.

Bible in Basic English (BBE)
And it will come about that in all the land, says the Lord, two parts of it will be cut off and come to an end; but the third will be still living there.

Darby English Bible (DBY)
And it shall come to pass in all the land, saith Jehovah, two parts therein shall be cut off [and] die; but the third shall be left therein.

World English Bible (WEB)
It shall happen that in all the land," says Yahweh, Two parts in it will be cut off and die; But the third will be left in it.

Young's Literal Translation (YLT)
And it hath come to pass, In all the land, an affirmation of Jehovah, Two parts in it are cut off -- they expire, And the third is left in it.

And
it
shall
come
to
pass,
וְהָיָ֤הwĕhāyâveh-ha-YA
all
in
that
בְכָלbĕkālveh-HAHL
the
land,
הָאָ֙רֶץ֙hāʾāreṣha-AH-RETS
saith
נְאֻםnĕʾumneh-OOM
the
Lord,
יְהוָ֔הyĕhwâyeh-VA
two
פִּֽיpee
parts
שְׁנַ֣יִםšĕnayimsheh-NA-yeem
therein
shall
be
cut
off
בָּ֔הּbāhba
and
die;
יִכָּרְת֖וּyikkortûyee-kore-TOO
third
the
but
יִגְוָ֑עוּyigwāʿûyeeɡ-VA-oo
shall
be
left
וְהַשְּׁלִשִׁ֖יתwĕhaššĕlišîtveh-ha-sheh-lee-SHEET
therein.
יִוָּ֥תֶרyiwwāteryee-WA-ter
בָּֽהּ׃bāhba

Cross Reference

Ezekiel 5:12
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.

Ezekiel 5:2
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು

Isaiah 6:13
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.

Matthew 24:21
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.

Mark 13:20
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.

Luke 19:41
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--

Luke 20:16
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.

Luke 21:20
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.

Luke 23:28
ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.

Romans 9:27
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

Romans 11:1
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.

1 Thessalonians 2:15
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

Revelation 8:7
ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

Revelation 16:19
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

Matthew 23:35
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

Matthew 22:7
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

Matthew 21:43
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

Isaiah 65:12
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

Isaiah 66:4
ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

Isaiah 66:24
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

Jeremiah 30:11
ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.

Daniel 9:27
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

Joel 2:31
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.

Amos 9:8
ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.

Zechariah 11:6
ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.

Zechariah 14:1
ಇಗೋ, ಕರ್ತನ ದಿನವು ಬರುತ್ತದೆ.

Malachi 3:1
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

Malachi 3:5
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Malachi 4:1
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Matthew 3:10
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

Deuteronomy 28:49
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ